ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ
ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಈ ಲೋಕಸಭೆ ಚುನಾವಣೆಯಲ್ಲಿ ಗೊಂದಲ ಸೃಷ್ಠಿಸಿ ಚುನಾವಣೆ ಮಾಡಬೇಕು ಎಂದು ಸಂಚು ರೂಪಿಸಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ನನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನ ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಪತ್ರ ಫಿನ್ಲ್ಯಾಂಡ್ನಿಂದ ಬಂದಿದೆ ಎಂದು ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಆ ಜೀವ ಬೆದರಿಕೆ ಪತ್ರವನ್ನು ಓದಿದರು. “ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತಹ ವೇಷ ಭೂಷಣ ತೊಟ್ಟರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗು, ನಿನ್ನ ಸೊಕ್ಕು ಹೊಲೆಯ ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಆಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ.
ಬೆದರಿಕೆ ಸಂಬಂಧ ಮಾರ್ಚ್ 17ರಂದು ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಿಕಾಸಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…