ರಾಜ್ಯ

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ಬಹಿರಂಗಗೊಳಿಸಿದ್ದಾರೆ.

‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು. ‘ಇಂಜಿನಿಯರಿಂಗ್ ಮುಗಿಸಿ, ಸಹಾಯಕ ನಿರ್ದೇಶಕ ಆದ ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡಿದೆ. ಮೊದಲ ಸಲ ಸಿನಿಮಾ ಮಾಡಿದಾಗ ಅಂದುಕೊಂಡ ರೀತಿಯಲ್ಲಿ ಕೈ ಹಿಡಿಯಲಿಲ್ಲ. ಸಿನಿಮಾ ನಿರ್ಮಾಣ ಮಾಡಿದೆ, ಡಿಸ್ಟ್ರಿಬ್ಯೂಷನ್ ಮಾಡಿದೆ, ಹೋಟೆಲ್ ಉದ್ಯಮ ಮಾಡಿದೆ. ಯಾವುದೂ ಕೈ ಹಿಡಿಯಲಿಲ್ಲ’ ಎಂದು ಮಲ್ಲಿಕಾರ್ಜುನ ಹೇಳಿದರು.

ನಂತರ ಹಲವು ವಿಷಯದಲ್ಲಿ ಕೈ ಸುಟ್ಟುಕೊಂಡೆ, ಮೈತುಂಬ ಸಾಲ ಮಾಡಿಕೊಂಡಿದ್ದೆ. ನಂತರ ಸಾಯುವ ನಿರ್ಧಾರಕ್ಕೂ ಬಂದಿದ್ದೆ, ಆದರೆ, ಸಾಯುವ ನಿರ್ಧಾರದಿಂದ ಹಿಂದೆ ಸರಿದೆ.. ‘ಅಂದು ಕುಂದಾಪರದಿಂದ ಹೊರಟೆ. ಸವದತ್ತಿಗೆ ಬಂದೆ. ನನ್ನ ಗೆಳೆಯನ ಬಳಿ ಹಣ ಪಡೆದೆ. ಕೊಲ್ಲಾಪುರ, ಸೊಲ್ಲಾಪುರ, ಉತ್ತರ ಭಾರತ ಸೇರಿದಂತೆ ಅನೇಕ ಕಡೆ ಸುತ್ತಾಡಿದೆ. ಹಲವು ಜಾಗದಲ್ಲಿ ಕೆಲವು ದಿನ ಇರುತ್ತಿದ್ದೆ, ಬಿಟ್ಟು ಹೋಗ್ತಿದ್ದೆ. ಹೋಟೆಲ್, ರೆಸಾರ್ಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲಸ ಮಾಡಿದೆ’ ಎಂದು ಅವರು ಹೇಳಿದ್ದಾರೆ.

‘ನನಗೆ ನೇಪಾಳದಲ್ಲಿ ಒಬ್ಬ ಗೆಳೆಯನಿದ್ದ. ಅವನ ಹೋಟೆಲ್ ಇತ್ತು. ಅಲ್ಲಿ ಸಾಕಷ್ಟು ಸಮಯ ಕಳೆದೆ. ನಾನು ಬದುಕಿದ್ದೀನಿ ಅಂತ ಪತ್ನಿಗೆ ಪತ್ರ ಬರೆದೆ. ತಾಯಿಗೂ ಬರೆದೆ. ದಿನಕರ್ ಅವರನ್ನು ಕಳೆದ ವರ್ಷ ಭೇಟಿ ಮಾಡಿದೆ. ದರ್ಶನ್‌ರನ್ನು ಭೇಟಿ ಮಾಡಬೇಕಿತ್ತು. ಆಗ ನನಗೆ ಪ್ಯಾರಲಿಸಿಸ್ ಆಯ್ತು. 7 ತಿಂಗಳು ಬೆಡ್ ರೆಸ್ಟ್ ಮಾಡಬೇಕಾಯಿತು. ಮತ್ತೆ ರೆಡಿ ಆದೆ. ಒಂದೂವರೆ ತಿಂಗಳ ಹಿಂದೆ ಬಂದು ಸಾಲ ಕೊಟ್ಟ ಎಲ್ಲರನ್ನೂ ಕೇಳಿಕೊಂಡಿದ್ದೇನೆ. ಸೋತಿದ್ದೇನೆ, ಸತ್ತಿಲ್ಲ ಎಂದು ಹೇಳಿದೆ. ಎಲ್ಲರೂ ಪಾಸಿಟಿವ್ ಆಗಿ ಮಾತನಾಡಿ ಧೈರ್ಯ ಹೇಳಿದ್ದಾರೆ’ ಎಂದು ಅವರು ವಿವರಿಸಿದರು.

ಸಾಲ ಮಾಡಿಕೊಂಡಾಗ ದರ್ಶನ್ ಬಳಿ 1 ಕೋಟಿ ರೂಪಾಯಿ ಸಹಾಯ ಕೇಳಿದೆ. ಅವರು ಕೊಟ್ಟರು. ಮತ್ತೆ ಕೇಳೋಕೆ ಮನಸ್ಸು ಬರಲಿಲ್ಲ. ನಾನು ಎಲ್ಲಿದ್ದೇನೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ತುಗೂದೀಪ ಪ್ರೊಡಕ್ಷನ್ಸ್ ಚೆನ್ನಾಗಿ ನೋಡಿಕೊಂಡಿದೆ. ನಾನು ಅವರಿಗೆ ಮೋಸ ಮಾಡಿಲ್ಲ. ದರ್ಶನ್ ಬಳಿ ಕಷ್ಟ ಎಂದು ಹಣ ತೆಗೆದುಕೊಂಡಿದ್ದು ಅಷ್ಟೇ ಹೊರತು, ಮತ್ತೆ ಯಾವಾಗಲೂ ಹಣ ಮಾಡಿಲ್ಲ ಎಂದಿದ್ದಾರೆ ಅವರು.

ದರ್ಶನ್ ಅವರಿಗೆ ನಾನು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿತ್ತು. ಎಷ್ಟು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿರಲಿಲ್ಲ. ಅವರನ್ನು ಫೇಸ್ ಮಾಡೋಕೆ ಆಗಲ್ಲ ಅನ್ನೋದು ಗೊತ್ತಾಯ್ತು. ಅವರ ಮೇಲಿನ ಅಪಾರ ಗೌರವ ಊರನ್ನು ಬಿಡುವಂತೆ ಮಾಡಿತು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago