ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.
‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…