ರಾಜ್ಯ

ಶ್ರೀರಾಮುಲುರನ್ನು ಶಾಸಕರನ್ನಾಗಿ ಮಾಡಿದ್ದು ನಾನು: ಜನಾರ್ಧನ ರೆಡ್ಡಿ

ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.

ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.

‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.

andolanait

Recent Posts

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

8 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

2 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

2 hours ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

3 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

3 hours ago