ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.
‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…