ರಾಜ್ಯ

ಶ್ರೀರಾಮುಲುರನ್ನು ಶಾಸಕರನ್ನಾಗಿ ಮಾಡಿದ್ದು ನಾನು: ಜನಾರ್ಧನ ರೆಡ್ಡಿ

ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.

ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.

‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

22 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

23 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago