ಕೊಪ್ಪಳ : ‘ಬಳ್ಳಾರಿಯ ಕೊಳಗೇರಿಯಲ್ಲಿ ಹುಟ್ಟಿರುವ ಬಿ.ಶ್ರೀರಾಮುಲುರನ್ನು ಕರೆತಂದು ಶಾಸಕರನ್ನಾಗಿ, ಅವರನ್ನು ರಾಜ್ಯಮಟ್ಟದ ನಾಯಕನನ್ನಾಗಿ ಬೆಳೆಸಿದ್ದು ನಾನು’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ಗಂಗಾವತಿಯಲ್ಲಿ ನಿನ್ನೆ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯದ ಬಿ.ಶ್ರೀರಾಮುಲು, ಸಿರಗುಪ್ಪಾ ಕ್ಷೇತ್ರದ ಸೋಮಲಿಂಗಪ್ಪ ಅವರನ್ನು ಶಾಸಕರನ್ನಾಗಿ ಮಾಡಿದ್ದು ನಾನು. ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಮೀಸಲಾತಿ ಇಲ್ಲದ ಸಂದರ್ಭದಲ್ಲೂ ನಾಯಕ ಸಮಾಜದವರನ್ನು ಶಾಸಕರನ್ನಾಗಿ ಮಾಡಿದ್ದೇನೆ’ ಎಂದು ಹೇಳಿದರು.
‘ಬಿ.ಶ್ರೀರಾಮುಲು ಹಾಗೂ ನನಗೆ ರಾಜಕೀಯ ಏನೇ ಆಗಿರಬಹುದು. ಆದರೆ, ನಾಯಕ ಸಮಾಜದ ಒಬ್ಬರನ್ನು ಬೆಳೆಸಿದ ಹೆಮ್ಮೆ ಇದೆ. ರಾಜ್ಯದಲ್ಲಿ ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ರಾಜ್ಯಾದ್ಯಂತ ಆಚರಿಸಲು ಹಾಗೂ ಸರ್ಕಾರಿ ರಜೆ ಘೋಷಿಸಬೇಕೆಂದು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದು ನಾನು ಹಾಗೂ ಶ್ರೀರಾಮುಲು’ ಎಂದು ನುಡಿದರು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನನ್ನ ಯೋಜನೆಗಳನ್ನು ಜಾರಿ ಮಾಡುತ್ತಿದ್ದು, ಪಂಚ ಗ್ಯಾರಂಟಿಗಳು ನನ್ನ ಯೋಜನೆಗಳು. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…