ಗೋಕಾಕ್: ನನ್ನ ಮಗ ರಾಕೇಶ್ ಮೃತರಾದಾಗ ಸಹಾಯಕ್ಕಾಗಿ ಮೋದಿ ಹಾಗೂ ಸುಷ್ಮಾ ಸ್ವರಾಜ್ ಅವರ ಹತ್ತಿರ ಮಾತನಾಡಿಲ್ಲ ಹಾಗೂ ನಾನು ಇದರಲ್ಲಿ ಯಾರ ಸಹಾಯವು ಪಡೆದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಅವರ ಮಗ ಮೃತರಾದಾಗ ಮೋದಿ ಅವರು ಮಾಡಿದ ಸಹಾಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಮೋದಿಯವರ ಜೊತೆ ಮಾತನಾಡಿ ಸಹಾಯ ಪಡೆದ ಸಿದ್ದರಾಮಯ್ಯ ಇಂದು ಪ್ರಜ್ವಲ್ ವಿಷಯದಲ್ಲಿ ಮೋದಿಯನ್ನು ಎಳೆದು ತರುತ್ತಿದ್ದಾರೆ ಎಂಬ ಎಚ್.ಡಿ ಕುಮಾರಸ್ವಾಮಿ ಮಾತಿಗೆ ಗೋಕಾಕದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನನ್ನ ಮಗ ವಿದೇಶದಲ್ಲಿ ಮೃತಪಟ್ಟಿದ್ದ. ಮೃತದೇಹ ಇಲ್ಲಿಗೆ ತರಿಸಿ ಅಂತ್ಯಕ್ರಿಯೆ ಮಾಡಿದ್ದೇವೆ. ಆ ಸಂದರ್ಭದಲ್ಲಿ ಸಹಾಯಕ್ಕಾಗಿ ಮೋದಿ ಹಾಗೂ ಬೇರೆ ಯಾರನ್ನೇ ಆಗಲಿ ಸಂಪರ್ಕಿಸುವ ಅವಶ್ಯಕತೆಯೆ ಬಂದಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ ಎಂದರು.
ಪ್ರಜ್ವಲ್ ಪ್ರಕರಣ ಕುರಿತು ಎಸ್ಐಟಿ ವರದಿಯೇ ಅಂತಿಮ. ವರದಿ ಬಂದ ಮೇಲೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…