ಬೆಂಗಳೂರು : ಬಿಜೆಪಿ ಜತೆಗಿನ ಮೈತ್ರಿ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಕೈ ಮುಗಿದು ಪ್ರಾರ್ಥಿಸುತ್ತಿದ್ದು, ಅವರು ನಿರ್ಧಾರವನ್ನು ಮರುಪರಿಶೀಲನೆ ಮಾಡಲಿ ಎಂದು ಜೆಡಿಎಸ್ ಬಂಡಾಯ ನಾಯಕ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ನನ್ನನ್ನು ತೆಗೆಯುವ ಅಧಿಕಾರನೇ ಇಲ್ಲ. ಹಾಗಾಗಿ ಎಲ್ಲವನ್ನೂ ಕಾದುನೋಡುವುದೇ ಒಳಿತು. ಇನ್ನೂ, ದೇವೇಗೌಡರು ಹಿರಿಯರು, ಅವರಿಗೆ ಇನ್ನೊಮ್ಮೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನಿಮ್ಮ ನಿರ್ಧಾರವನ್ನು ಮರುಪರಿಶೀಲನೆ ಮಾಡಿ ಎಂದರು.
ರಾಜ್ಯ ಘಟಕ ವಿಸರ್ಜನೆ ಮಾಡುವುದಕ್ಕೆ ಬರಲ್ಲ. ದೇವೇಗೌಡರು ತಪ್ಪು ಮಾಡಿದ್ದಾರೆ ಎಂದು ನೋವು ಆಗಿಲ್ಲ. ಇದನ್ನು ಸರಿಪಡಿಸಿಕೊಂಡು ಹೋಗೋಣ. ಇದಕ್ಕೆ ಒಪ್ಪಿದರೆ ಒಟ್ಟಾಗಿ ಹೋಗಲು ಸಿದ್ಧ. ವಿಜಯದಶಮಿಯಲ್ಲಿ ನನಗೆ ಬೇವು ಬೆಲ್ಲ ಎರಡೂ ಸಿಕ್ಕಿದೆ ಎಂದ ಅವರು, ಇವತ್ತು ರಾಜ್ಯದಲ್ಲಿ ಯಾವ ಸಿದ್ಧಾಂತಕ್ಕೆ ನಿಂತಿದ್ದೇವೋ ಆ ಸಿದ್ಧಾಂತಕ್ಕೆ ದೇವೇಗೌಡರು ನಿಲ್ಲಬೇಕು ಎನ್ನುವುದು ನನ್ನ ಇಚ್ಛೆ ಎಂದು ಹೇಳಿದರು.
ಉದಯಪುರದಲ್ಲಿ ಜೆಡಿಎಸ್ ಕಾರ್ಯಕ್ರಮ ಇದೆ, ಬೇರೆ ಪಕ್ಷದ ನಾಯಕರನ್ನೂ ಭೇಟಿ ಮಾಡುತ್ತೇನೆ. ನಾನು ಒಂದೇ ಕಡೆ ಕೂರಲ್ಲ, ತ್ರಿಲೋಕ ಸಂಚಾರಿ ಎಂದ ಅವರು, ತಾಯಿ ಚಾಮುಂಡೇಶ್ವರಿ ಕೃಪೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಲಿ. ದುಷ್ಟ ಶಕ್ತಿಗಳ ಸಂಹಾರ ಆಗಲಿ ಎಂದು ಇಬ್ರಾಹಿಂ ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…