ರಾಜ್ಯ

ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಡಿ.ಕೆ.ಶಿವಕುಮಾರ್ ಅವರು ಪಕ್ಷದ ಶಿಸ್ತಿಗೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:-ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್‌

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಥವಾ ಪ್ರಯತ್ನ ಪಡುವ ಅಗತ್ಯವಿಲ್ಲ. ಹಣೆಯಲ್ಲಿ ಬರೆದಿದ್ದರೆ ಅವಕಾಶ ಸಿಗುತ್ತದೆ. ದಲಿತ ಮುಖ್ಯಮಂತ್ರಿಯ ಬಗ್ಗೆ ಬೇಡಿಕೆಗಳು ಕೇಳಿ ಬರುತ್ತಿರುವುದರಲ್ಲಿ ತಪ್ಪಿಲ್ಲ. ದಲಿತರು ಸಮಾವೇಶ ಮಾಡುವುದು ಕೂಡ ತಪ್ಪಲ್ಲ, ಈ ಎಲ್ಲಾ ಬೆಳವಣಿಗೆಗಳು ಪಕ್ಷ ಸಂಘಟನೆಗೆ ಪೂರಕವಾಗಿವೆ.

ಇನ್ನು 95-98 ವಯಸ್ಸು ಆಗಿರುವವರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು ತಪ್ಪಲ್ಲ ಎಂದರು.

ರಾಜ್ಯದಲ್ಲಿ 5 ವರ್ಷ ಸರ್ಕಾರ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನರು 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಿರುವಾಗ ಎರಡೂವರೆ ವರ್ಷ, ಮೂರು ವರ್ಷ ಎಂಬ ಅಧಿಕಾರ ಹಂಚಿಕೆಯ ಚರ್ಚೆಗಳು ಅಪ್ರಸ್ತುತ ಎಂದರು.

ಆಂದೋಲನ ಡೆಸ್ಕ್

Recent Posts

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 mins ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

37 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

4 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

20 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

23 hours ago