ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಡಿ.ಕೆ.ಶಿವಕುಮಾರ್ ಅವರು ಪಕ್ಷದ ಶಿಸ್ತಿಗೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:-ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಥವಾ ಪ್ರಯತ್ನ ಪಡುವ ಅಗತ್ಯವಿಲ್ಲ. ಹಣೆಯಲ್ಲಿ ಬರೆದಿದ್ದರೆ ಅವಕಾಶ ಸಿಗುತ್ತದೆ. ದಲಿತ ಮುಖ್ಯಮಂತ್ರಿಯ ಬಗ್ಗೆ ಬೇಡಿಕೆಗಳು ಕೇಳಿ ಬರುತ್ತಿರುವುದರಲ್ಲಿ ತಪ್ಪಿಲ್ಲ. ದಲಿತರು ಸಮಾವೇಶ ಮಾಡುವುದು ಕೂಡ ತಪ್ಪಲ್ಲ, ಈ ಎಲ್ಲಾ ಬೆಳವಣಿಗೆಗಳು ಪಕ್ಷ ಸಂಘಟನೆಗೆ ಪೂರಕವಾಗಿವೆ.
ಇನ್ನು 95-98 ವಯಸ್ಸು ಆಗಿರುವವರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು ತಪ್ಪಲ್ಲ ಎಂದರು.
ರಾಜ್ಯದಲ್ಲಿ 5 ವರ್ಷ ಸರ್ಕಾರ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನರು 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಿರುವಾಗ ಎರಡೂವರೆ ವರ್ಷ, ಮೂರು ವರ್ಷ ಎಂಬ ಅಧಿಕಾರ ಹಂಚಿಕೆಯ ಚರ್ಚೆಗಳು ಅಪ್ರಸ್ತುತ ಎಂದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…