ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಡಿ.ಕೆ.ಶಿವಕುಮಾರ್ ಅವರು ಪಕ್ಷದ ಶಿಸ್ತಿಗೆ ಚ್ಯುತಿ ಬರದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:-ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಥವಾ ಪ್ರಯತ್ನ ಪಡುವ ಅಗತ್ಯವಿಲ್ಲ. ಹಣೆಯಲ್ಲಿ ಬರೆದಿದ್ದರೆ ಅವಕಾಶ ಸಿಗುತ್ತದೆ. ದಲಿತ ಮುಖ್ಯಮಂತ್ರಿಯ ಬಗ್ಗೆ ಬೇಡಿಕೆಗಳು ಕೇಳಿ ಬರುತ್ತಿರುವುದರಲ್ಲಿ ತಪ್ಪಿಲ್ಲ. ದಲಿತರು ಸಮಾವೇಶ ಮಾಡುವುದು ಕೂಡ ತಪ್ಪಲ್ಲ, ಈ ಎಲ್ಲಾ ಬೆಳವಣಿಗೆಗಳು ಪಕ್ಷ ಸಂಘಟನೆಗೆ ಪೂರಕವಾಗಿವೆ.
ಇನ್ನು 95-98 ವಯಸ್ಸು ಆಗಿರುವವರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು ತಪ್ಪಲ್ಲ ಎಂದರು.
ರಾಜ್ಯದಲ್ಲಿ 5 ವರ್ಷ ಸರ್ಕಾರ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನರು 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಿರುವಾಗ ಎರಡೂವರೆ ವರ್ಷ, ಮೂರು ವರ್ಷ ಎಂಬ ಅಧಿಕಾರ ಹಂಚಿಕೆಯ ಚರ್ಚೆಗಳು ಅಪ್ರಸ್ತುತ ಎಂದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…