ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಬಿಜೆಪಿಯವರಿಗೆ ಶ್ರೀರಾಮನೇ ಚುನಾವಣಾ ಅಜೆಂಡಾ ಎಂಬ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಬಿಜೆಪಿ ನೇರವಾಗಿ ತೊಡಗಿಸಿಕೊಂಡಿತ್ತು. ರಾಮಮಂದಿರಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಜ್ ಯಾತ್ರೆಗೆ ಕಳಿಸೋದು ಮಾತ್ರ ಜಾತ್ಯಾತೀತತೆಯೇ? ಅಯೋಧ್ಯೆಗೆ ಯಾತ್ರೆ ಕಳುಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆಯೇ? ಚುನಾವಣೆ ವೇಳೆಯ ಹಿಂದೂಗಳು ಇದೇ ರೀತಿ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.
ನಾವು ಹುಟ್ಟಿನಿಂದ ಸಾಯುವವರೆಗೂ ಹಿಂದೂಗಳು, ಆದರೆ ಕೆಲವರಿಗೆ ಚುನಾವಣೆ ವೇಳೆ ಉದ್ದದ ನಾಮ ಬರುತ್ತದೆ. ಜೈ ಶ್ರೀರಾಮ್, ಹರಹರ ಮಹಾದೇವ ಘೋಷಣೆಗಳು ಬರುತ್ತವೆ. ಆಮೇಲೆ ಇವರೆಲ್ಲ ನಾಪತ್ತೆ ಆಗುತ್ತಾರೆ. ಜಾತ್ಯಾತೀತತೆ ಅಂದರೆ ಸರ್ವ ಧರ್ಮ ಭಾವ, ತಾಲಿಬಾನ್ ಹಾಗೂ ಹಮಾಸ್ಗಳ ಬಳಿ ಸರ್ವ ಧರ್ಮ ಭಾವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆಗೆ ಉಚಿತ ಪ್ರವಾಸ ಆಯೋಜನೆ ಎಂಬ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರಕ್ಕೆ ಪರಮೇಶ್ವರ್ ಅವರು ಟೀಕೆ ಮಾಡಿದ್ದರು.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…