ರಾಜ್ಯ

ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ : ಸಿ.ಟಿ ರವಿ

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಬಿಜೆಪಿಯವರಿಗೆ ಶ್ರೀರಾಮನೇ ಚುನಾವಣಾ ಅಜೆಂಡಾ ಎಂಬ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಬಿಜೆಪಿ ನೇರವಾಗಿ ತೊಡಗಿಸಿಕೊಂಡಿತ್ತು. ರಾಮಮಂದಿರಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಜ್ ಯಾತ್ರೆಗೆ ಕಳಿಸೋದು ಮಾತ್ರ ಜಾತ್ಯಾತೀತತೆಯೇ? ಅಯೋಧ್ಯೆಗೆ ಯಾತ್ರೆ ಕಳುಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆಯೇ? ಚುನಾವಣೆ ವೇಳೆಯ ಹಿಂದೂಗಳು ಇದೇ ರೀತಿ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.

ನಾವು ಹುಟ್ಟಿನಿಂದ ಸಾಯುವವರೆಗೂ ಹಿಂದೂಗಳು, ಆದರೆ ಕೆಲವರಿಗೆ ಚುನಾವಣೆ ವೇಳೆ ಉದ್ದದ ನಾಮ ಬರುತ್ತದೆ. ಜೈ ಶ್ರೀರಾಮ್, ಹರಹರ ಮಹಾದೇವ ಘೋಷಣೆಗಳು ಬರುತ್ತವೆ. ಆಮೇಲೆ ಇವರೆಲ್ಲ ನಾಪತ್ತೆ ಆಗುತ್ತಾರೆ. ಜಾತ್ಯಾತೀತತೆ ಅಂದರೆ ಸರ್ವ ಧರ್ಮ ಭಾವ, ತಾಲಿಬಾನ್ ಹಾಗೂ ಹಮಾಸ್‍ಗಳ ಬಳಿ ಸರ್ವ ಧರ್ಮ ಭಾವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಯೋಧ್ಯೆಗೆ ಉಚಿತ ಪ್ರವಾಸ ಆಯೋಜನೆ ಎಂಬ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರಕ್ಕೆ ಪರಮೇಶ್ವರ್ ಅವರು ಟೀಕೆ ಮಾಡಿದ್ದರು.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago