ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಬಿಜೆಪಿಯವರಿಗೆ ಶ್ರೀರಾಮನೇ ಚುನಾವಣಾ ಅಜೆಂಡಾ ಎಂಬ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಬಿಜೆಪಿ ನೇರವಾಗಿ ತೊಡಗಿಸಿಕೊಂಡಿತ್ತು. ರಾಮಮಂದಿರಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಜ್ ಯಾತ್ರೆಗೆ ಕಳಿಸೋದು ಮಾತ್ರ ಜಾತ್ಯಾತೀತತೆಯೇ? ಅಯೋಧ್ಯೆಗೆ ಯಾತ್ರೆ ಕಳುಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆಯೇ? ಚುನಾವಣೆ ವೇಳೆಯ ಹಿಂದೂಗಳು ಇದೇ ರೀತಿ ಮಾತನಾಡುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.
ನಾವು ಹುಟ್ಟಿನಿಂದ ಸಾಯುವವರೆಗೂ ಹಿಂದೂಗಳು, ಆದರೆ ಕೆಲವರಿಗೆ ಚುನಾವಣೆ ವೇಳೆ ಉದ್ದದ ನಾಮ ಬರುತ್ತದೆ. ಜೈ ಶ್ರೀರಾಮ್, ಹರಹರ ಮಹಾದೇವ ಘೋಷಣೆಗಳು ಬರುತ್ತವೆ. ಆಮೇಲೆ ಇವರೆಲ್ಲ ನಾಪತ್ತೆ ಆಗುತ್ತಾರೆ. ಜಾತ್ಯಾತೀತತೆ ಅಂದರೆ ಸರ್ವ ಧರ್ಮ ಭಾವ, ತಾಲಿಬಾನ್ ಹಾಗೂ ಹಮಾಸ್ಗಳ ಬಳಿ ಸರ್ವ ಧರ್ಮ ಭಾವ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆಗೆ ಉಚಿತ ಪ್ರವಾಸ ಆಯೋಜನೆ ಎಂಬ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಚಾರಕ್ಕೆ ಪರಮೇಶ್ವರ್ ಅವರು ಟೀಕೆ ಮಾಡಿದ್ದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…