ಬೆಂಗಳೂರು: ಖಾಸಗಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಅಲ್ಲಿಗೆ ಹೋಗದೇ ಹೆಚ್ಚು ಕಡಿಮೆ ಒಂದು ವರ್ಷವಾಗಿತ್ತು. ದೆಹಲಿಯಲ್ಲಿ ತಮ್ಮ ಕಾಂಗ್ರೆಸ್ ಕೇಂದ್ರ ಕಚೇರಿ ಇರುವುದರಿಂದ ಕೇಂದ್ರ ಕಚೇರಿಗೂ ಭೇಡಿ ನೀಡುವುದು ವಾಡಿಕೆ. ಹೀಗಾಗಿ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
ಇದೇ ವೇಳೆ ತಮ್ಮ ಬೆಂಬಲಿಗರು ತಾವು ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ನಾನು ಅದರ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಷಯಗಳ ಬಗ್ಗೆ ನಾನು ಬಹಿರಂಗವಾಗಿ ಮಾತನಾಡಲ್ಲ. ನಮ್ಮ ಪಕ್ಷದ ಸಾಮಾನ್ಯ ನಿಯಮವೆಂದರೆ ನಮ್ಮ ಭಾವನೆಗಳನ್ನು ಹೈಕಮಾಂಡ್ ಬಳಿ ವ್ಯಕ್ತಪಡಿಸುವುದು. ಇದನ್ನು ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಮಾಡುತ್ತಿದ್ದಾರೆ. ನಾನು ಸೇರಿದಂತೆ ಎಲ್ಲರೂ ಅದನ್ನೇ ಮಾಡುತ್ತೇವೆ ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…