ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು.
ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿ ಅವರನ್ನು ಬಿಜೆಪಿಯ ಹಿರಿಯ ಶಾಸಕ ಸುನಿಲ್ಕುಮಾರ್ ಮಧ್ಯಪ್ರವೇಶಿಸಿ ಡಿ.ಕೆ.ಶಿವ ಕುಮಾರ್ ಅವರು ಮುಖ್ಯ ಮಂತ್ರಿಯಾದರೂ ಖುಷಿಯಾಗುತ್ತದೆ ಎಂದು ಹೇಳಲಿಲ್ಲ ಎಂದು ಛೇಡಿಸಿದರು.
ಆಗ ಮುಖ್ಯಮಂತ್ರಿಗಳು, ನಮ್ಮ ಪಕ್ಷದ ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯ ಮಂತ್ರಿ ಎಂಬುದನ್ನು ಪುನರುಚ್ಚರಿಸಿದರು. ನಮ್ಮಲ್ಲಿ ಮುಖ್ಯಮಂತ್ರಿಯಾದರೂ ಖುಷಿ ಯಾಗುತ್ತದೆ. 224 ಶಾಸಕರೂ ಮುಖ್ಯಮಂತ್ರಿಯಾಗಲು ಅರ್ಹರು. ಯಾರೇ ಸಿಎಂ ಆದರೂ ಖುಷಿಪಡುತ್ತೇನೆ. ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಶಾಸಕ ಕೋನ ರೆಡ್ಡಿ ಸೇರಿದಂತೆ ಕೆಲವರ ಹೆಸರನ್ನು ಮಾತ್ರ ಉಲ್ಲೇಖಿಸಿ ಅವರು ಮುಖ್ಯ ಮಂತ್ರಿಯಾಗಬಾರದೇ
ಮುಖ್ಯಮಂತ್ರಿ ಎಂದು ಪ್ರಶ್ನಿಸಿದರು. ಅವರೆಲ್ಲರಿಗೂ ಯೋಗ್ಯತೆ ಇದೆ, ಅವಕಾಶ ಸಿಗಲ್ಲ ಅಷ್ಟೇ ಎಂದರು.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…