ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು.
ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು ಅಂದಾಜುಗಳ ಮೇಲೆ ನಡೆದ ಸಾಮಾನ್ಯ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿ ಅವರನ್ನು ಬಿಜೆಪಿಯ ಹಿರಿಯ ಶಾಸಕ ಸುನಿಲ್ಕುಮಾರ್ ಮಧ್ಯಪ್ರವೇಶಿಸಿ ಡಿ.ಕೆ.ಶಿವ ಕುಮಾರ್ ಅವರು ಮುಖ್ಯ ಮಂತ್ರಿಯಾದರೂ ಖುಷಿಯಾಗುತ್ತದೆ ಎಂದು ಹೇಳಲಿಲ್ಲ ಎಂದು ಛೇಡಿಸಿದರು.
ಆಗ ಮುಖ್ಯಮಂತ್ರಿಗಳು, ನಮ್ಮ ಪಕ್ಷದ ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯ ಮಂತ್ರಿ ಎಂಬುದನ್ನು ಪುನರುಚ್ಚರಿಸಿದರು. ನಮ್ಮಲ್ಲಿ ಮುಖ್ಯಮಂತ್ರಿಯಾದರೂ ಖುಷಿ ಯಾಗುತ್ತದೆ. 224 ಶಾಸಕರೂ ಮುಖ್ಯಮಂತ್ರಿಯಾಗಲು ಅರ್ಹರು. ಯಾರೇ ಸಿಎಂ ಆದರೂ ಖುಷಿಪಡುತ್ತೇನೆ. ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಶಾಸಕ ಕೋನ ರೆಡ್ಡಿ ಸೇರಿದಂತೆ ಕೆಲವರ ಹೆಸರನ್ನು ಮಾತ್ರ ಉಲ್ಲೇಖಿಸಿ ಅವರು ಮುಖ್ಯ ಮಂತ್ರಿಯಾಗಬಾರದೇ
ಮುಖ್ಯಮಂತ್ರಿ ಎಂದು ಪ್ರಶ್ನಿಸಿದರು. ಅವರೆಲ್ಲರಿಗೂ ಯೋಗ್ಯತೆ ಇದೆ, ಅವಕಾಶ ಸಿಗಲ್ಲ ಅಷ್ಟೇ ಎಂದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…