Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಗೆಲ್ಲಿಸಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗುತ್ತೇನೆ. ಅದೇ ನನ್ನ ಉದ್ದೇಶ ಎಂದು ಹೇಳಿದರು.

ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ತೆರೆದಿರುತ್ತದೆ. ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದು ಹೇಳಿದರು.

Tags:
error: Content is protected !!