ಶಿವಮೊಗ್ಗ : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬಿಜೆಪಿ ಪಕ್ಷದಿಂದ ತಮ್ಮ ಮಗ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ ಹಿನ್ನಲೆ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲ ಬೆಂಬಲಿಗರ ವತ್ತಾಯದ ಮೇರೆಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನ ಮಗನಿಗೆ ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸಿ, ತಾವೆ ಬಂದು ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದಿದ್ದರು. ಆದರೆ ತಮ್ಮ ಮಾತಿಗೆ ತಪ್ಪುವ ಮೂಲಕ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸುವ ಮೂಲಕ ನಮಗೆ ಮೋಸ ಮಾಡಿದ್ದಾರೆ. ಇದರಿಂದಾಗಿ ನಮ್ಮ ಬೆಂಬಲಿಗರು ಮನ ನೊಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸೂಚಿಸಿದ್ದಾರೆ. ಹೀಗಾಗಿ ಅವರ ಒತ್ತಾಯದ ಮೇರೆಗೆ ಶಿವಮೊಗ್ಗದಿಂದ ನಾನೇ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ರಕ್ತದ ಕಣ ಕಣದಲ್ಲಿ ಬಿಜೆಪಿ : ಯಾವುದೇ ಕಾರಣಕ್ಕು ನಾನು ಪಕ್ಷಕ್ಕೆ ದ್ರೋಹ ಮಾಡುತ್ತಿಲ್ಲ, ಮಾಡುವುದೂ ಇಲ್ಲ. ನನ್ನ ರಕ್ತದ ಕಣ-ಕಣದಲ್ಲೂ ಬಿಜೆಪಿ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀರಾಮನನ್ನ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…