ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಬೇಸರದಿಂದ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು, ನಾನು ಯಾವ ಪಕ್ಷದ ಬಾವುಟ ಹಿಡಿಯಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ. ನಮ್ಮ ಕಾರ್ಯಕರ್ತರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ಬಂದಂತಾಗಿದೆ. ಹಾಗಾಗಿ ನಾನು ಮುಂದಿನ ದಿನಗಳಲ್ಲಿ ಯಾವ ಬಾವುಟ ಹಿಡಿಯಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಇದನ್ನು ಓದಿ: ಕೆ.ಎನ್ ರಾಜಣ್ಣ ವಜಾಕ್ಕೆ ಶ್ರೀರಾಮುಲು ಕಿಡಿ
ಇನ್ನು ಮುಂದುವರಿದು ಮಾತನಾಡಿದ ಅವರು, 2004ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್ ವಾಶ ಮಾಡಿದ್ದೆವು. ಕಾಂಗ್ರೆಸ್ ಅನ್ನು ಕಂಪ್ಲೀಟ್ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೆ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…