ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಗುಂಪುಗಾರಿಕೆ ಎನ್ನುವುದು ನನ್ನ ರಕ್ತದಲ್ಲೇ ಇಲ್ಲ ಎಂದು ಹೇಳಿದರು.
ಇದನ್ನು ಓದಿ: ಸಿಎಂ ಬದಲಾವಣೆ ವಿಚಾರ: ವರಿಷ್ಠರ ತೀರ್ಮಾನವೇ ಅಂತಿಮ ಎಂದ ತನ್ವೀರ್ ಸೇಠ್
ಇನ್ನು ಶಾಸಕರು, ಸಚಿವರು ದೆಹಲಿಗೆ ಹೋಗುವುದರಲ್ಲಿ ತಪ್ಪೇನಿದೆ. ಅದು ಅವರ ಹಕ್ಕು, ಹೈಕಮಾಂಡ್ ಜೊತೆ ಮಾತನಾಡಲು ಅವರು ದೆಹಲಿಗೆ ಹೋಗಿದ್ದಾರೆ. ಡಿನ್ನರ್ ಮೀಟಿಂಗ್ಗಳು ರಾಜಕೀಯದಲ್ಲಿ ನಡೆಯುತ್ತಿರುತ್ತದೆ. ಇದರಲ್ಲಿ ತಪ್ಪೇನಿದೆ ಎಂದು ಹೇಳಿದರು.
ನಾನೇ ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ವಿಚಾರಧಾರೆಗಳನ್ನು ಹೇಳಿದ್ದಾರೆ. ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…