Government will be rock solid for five years CM Siddaramaiah
ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್.ಪಾಟೀಲ್ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.
ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.
ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…