ರಾಜ್ಯ

ಕಾಂಗ್ರೆಸ್‌ ಶಾಸಕರ ಅಸಮಾಧಾನ ಬಗೆಹರಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌‍ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್‌.ಪಾಟೀಲ್‌ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.

ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್‌ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

6 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

6 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago