ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಸ್ವತಃ ಅಶೋಕ್ ಅವರೇ ನನ್ನನ್ನು ಚೇಂಬರ್ಗೆ ಕರೆದು ಮಾತನಾಡಿದರು. ಯತ್ನಾಳ್ ಅವರೇ ನೀವು ಬಿಜೆಪಿಗೆ ವಾಪಸ್ ಆಗಲೇಬೇಕು. ಬಿಜೆಪಿ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ನೀವು ಪಕ್ಷಕ್ಕೆ ಮರಳಿ ಬನ್ನಿ ಎಂದಿದ್ದಾರೆ. ಆದರೆ ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ಮರಳಿ ಬರುತ್ತೇನೆ ಎಂದು ಹೇಳಿದ್ದೇನೆ ಎಂದರು.
ದೆಹಲಿಗೆ ನಿಯೋಗದೊಂದಿಗೆ ಹೋಗಿ ಅಮಿತ್ ಶಾ ಅವರನ್ನು ಭೇಟಿಯಾಗುವ ಕುರಿತು ಚರ್ಚೆ ನಡೆಸಲಾಯಿತು. ಏನೇ ಇದ್ದರೂ ನಾನು ಸುಮ್ಮನೆ ಬಿಜೆಪಿಗೆ ಹೋಗಲ್ಲ. ನನ್ನನ್ನು ಸಿಎಂ ಮಾಡುತ್ತಾರೆ ಅನ್ನುವುದಾದರೆ ಮಾತ್ರ ಹೋಗುತ್ತೇನೆ. ಇಲ್ಲವಾದಲ್ಲಿ ನಾವೇ ಜೆಸಿಬಿ ಪಕ್ಷವನ್ನು ಕಟ್ಟುತ್ತೇವೆ ಎಂದು ಹೇಳಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…