C P Yogeshwar
ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್ನಲ್ಲಿ ನಾನು ಬಹಳ ಸಕ್ರಿಯನಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿಯಿಲ್ಲ. ಆದರೆ ಮೊದಲು ಡಿಕೆಶಿಗೆ ಸಿಎಂ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು
ಇನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತ್ತಿದ್ದಾರೆ. ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…