C P Yogeshwar
ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್ನಲ್ಲಿ ನಾನು ಬಹಳ ಸಕ್ರಿಯನಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿಯಿಲ್ಲ. ಆದರೆ ಮೊದಲು ಡಿಕೆಶಿಗೆ ಸಿಎಂ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು
ಇನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸೀರಿಯಸ್ ಆಗಿ ಫಾಲೋ ಮಾಡುತ್ತಿಲ್ಲ. ಯಾರು ಏನು ಆಗುತ್ತಿದ್ದಾರೆ. ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…