ರಾಜ್ಯ

ಈಶ್ವರಪ್ಪನವರ ಮಗನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಯಡಿಯೂರಪ್ಪ

ಶಿವಮೊಗ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಬಿಜೆಪಿಯ ಬಿ.ಸಿ.ಪಾಟೀಲ್, ಜಗದೀಶ್ ಶೆಟ್ಟರ್ , ಶಾಸಕ ಬಸವರಾಜ ಬೊಮ್ಮಯಿ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಅವರ ಮಧ್ಯೆ ಟಿಕೆಟ್ ಪೈಪೋಟಿ ಏರ್ಪಟ್ಟಿದ್ದು, ಈ ವಿಚಾರದ ಸಲುವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂತೇಶ್‌ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮಾಜಿ ಡಿಸಿಎಂ ಈಶ್ವರಪ್ಪ ಅಭಿಮಾನಿಗಳು ಹಾಗೂ ಕುರುಬ ಸಮಾಜದ ಮುಖಂಡರು ಬಿಎಸ್‌ವೈ ಮನೆಗೆ ಭೇಟಿ ನೀಡಿ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪತ್ರಿಕ್ರಿಯಿಸಿದ ಯಡಿಯೂರಪ್ಪ ಮಾ.9 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿರವರ ಮನೆಗೆ ಕಳುಹಿಸಿದ್ದೆ ಮತ್ತು ದೆಹಲಿಯಲ್ಲಿ ಅಮಿತ್ ಶಾರವರು ನನ್ನ ಜೊತೆ ಈಶ್ವರಪ್ಪ ಅವರನ್ನೂ ಸಹ ಚರ್ಚಿಸಲು ಬರ ಹೇಳಿದ್ದಾರೆ ಎಂದು ಹೇಳಿದ್ದಾರೆ.

ನಾನೇ ಖುದ್ದಾಗಿ ಅವರ ಜೊತೆಗೆ ನಿಲ್ಲುತ್ತೇನೆ ನಾನು ಬೇರೆ ಅಲ್ಲ, ಈಶ್ವರಪ್ಪ ಬೇರೆ ಅಲ್ಲ. ಮಾಜಿ ಸಚಿವ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಪ್ರಾಮಾಣಿಕವಾಗಿ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತೇನೆ ಎಂದು ಭರವಸೆ ನೀಡಿದ್ದಾರೆ.
ಈ ದಿನ ನಡೆಯಬೇಕಿದ್ದ ಬಿಜೆಪಿ ಸಿಇಪಿ ಸಭೆಯನ್ನು ಮುಂದೂಡಲಾಗಿದ್ದು, ಈ ವಿಷಯದ ಬಗ್ಗೆ ಮಾತನಾಡಿದ ಅವರು ಸಭೆಯಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಬಹುದು ಹಾಗಾಗಿ ಒಂದು ದಿನ ಮುಂದೂಡಿ ನಾಳೆ ಮತ್ತೆ ಚುನಾವಣಾ ಸಮಿತಿ ಸಭೆಯನ್ನು ಕರೆಯಬಹುದು ಎಂದರು.

andolana

Recent Posts

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

23 mins ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

58 mins ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

1 hour ago

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

1 hour ago

ಚಾ.ನಗರ | ವಿವಿಧ ಗ್ರಾ.ಪಂಚಾಯ್ತಿಗಳಿಗೆ ಸಿಇಒ ದೀಢಿರ್‌ ಭೇಟಿ

ಚಾಮರಾಜನಗರ : ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅವರು ದೀಢಿರ್‌ಭೇಟಿ ನೀಡಿ, ವಿವಿಧ…

1 hour ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ…

2 hours ago