ರಾಜ್ಯ

ಈಶ್ವರಪ್ಪನವರ ಮಗನಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ: ಯಡಿಯೂರಪ್ಪ

ಶಿವಮೊಗ್ಗ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ಶುರುವಾಗಿದೆ. ಬಿಜೆಪಿಯ ಬಿ.ಸಿ.ಪಾಟೀಲ್, ಜಗದೀಶ್ ಶೆಟ್ಟರ್ , ಶಾಸಕ ಬಸವರಾಜ ಬೊಮ್ಮಯಿ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಅವರ ಮಧ್ಯೆ ಟಿಕೆಟ್ ಪೈಪೋಟಿ ಏರ್ಪಟ್ಟಿದ್ದು, ಈ ವಿಚಾರದ ಸಲುವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂತೇಶ್‌ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಮಾಜಿ ಡಿಸಿಎಂ ಈಶ್ವರಪ್ಪ ಅಭಿಮಾನಿಗಳು ಹಾಗೂ ಕುರುಬ ಸಮಾಜದ ಮುಖಂಡರು ಬಿಎಸ್‌ವೈ ಮನೆಗೆ ಭೇಟಿ ನೀಡಿ ಕಾಂತೇಶ್ ಅವರಿಗೆ ಟಿಕೆಟ್ ಕೊಡಿಸುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪತ್ರಿಕ್ರಿಯಿಸಿದ ಯಡಿಯೂರಪ್ಪ ಮಾ.9 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿರವರ ಮನೆಗೆ ಕಳುಹಿಸಿದ್ದೆ ಮತ್ತು ದೆಹಲಿಯಲ್ಲಿ ಅಮಿತ್ ಶಾರವರು ನನ್ನ ಜೊತೆ ಈಶ್ವರಪ್ಪ ಅವರನ್ನೂ ಸಹ ಚರ್ಚಿಸಲು ಬರ ಹೇಳಿದ್ದಾರೆ ಎಂದು ಹೇಳಿದ್ದಾರೆ.

ನಾನೇ ಖುದ್ದಾಗಿ ಅವರ ಜೊತೆಗೆ ನಿಲ್ಲುತ್ತೇನೆ ನಾನು ಬೇರೆ ಅಲ್ಲ, ಈಶ್ವರಪ್ಪ ಬೇರೆ ಅಲ್ಲ. ಮಾಜಿ ಸಚಿವ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಪ್ರಾಮಾಣಿಕವಾಗಿ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತೇನೆ ಎಂದು ಭರವಸೆ ನೀಡಿದ್ದಾರೆ.
ಈ ದಿನ ನಡೆಯಬೇಕಿದ್ದ ಬಿಜೆಪಿ ಸಿಇಪಿ ಸಭೆಯನ್ನು ಮುಂದೂಡಲಾಗಿದ್ದು, ಈ ವಿಷಯದ ಬಗ್ಗೆ ಮಾತನಾಡಿದ ಅವರು ಸಭೆಯಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಬಹುದು ಹಾಗಾಗಿ ಒಂದು ದಿನ ಮುಂದೂಡಿ ನಾಳೆ ಮತ್ತೆ ಚುನಾವಣಾ ಸಮಿತಿ ಸಭೆಯನ್ನು ಕರೆಯಬಹುದು ಎಂದರು.

andolana

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

8 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

12 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

12 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

12 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

13 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

13 hours ago