ರಾಜ್ಯ

ನನಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗಿಳಿದು ಮಾತನಾಡುತ್ತೇನೆ: ಶ್ರೀರಾಮುಲು ಎಚ್ಚರಿಕೆ

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ನಾಯಕರ ಭೇಟಿ ವಿಚಾರವಾಗಿ ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಅಪಾಯಿಟ್ಮೆಂಟ್‌ ಕೇಳಿ ಹೋಗಬೇಕು ಅಂತೇನು ಇಲ್ಲ. ಅವಕಾಶ ಸಿಕ್ಕಾಗಲೆಲ್ಲಾ ದೆಹಲಿಗೆ ಹೋಗಿ ಬರುತ್ತೇನೆ. ಇದರಲ್ಲಿ ಯಾರ ಅಪ್ಪಣೆಯೂ ಬೇಕಿಲ್ಲ. ಎಲ್ಲಾ ವಿಚಾರವನ್ನು ವರಿಷ್ಠರ ಬಳಿ ಹೇಳಿ ಬರುತ್ತೇನೆ. ರಾಮುಲು ಸುಮ್ಮನೆ ಇದ್ರು ಎಂದು ಹೇಳುತ್ತಿದ್ದರು. ಇನ್ನು ಮುಂದೆ ಸುಮ್ಮನೆ ಇರುವುದಿಲ್ಲ. ಇನ್ನು ಮುಂದೆ ನಾನು ಮಾತನಾಡುತ್ತೇನೆ. ಯಾರ ಮುಲಾಜು ಇಲ್ಲದೇ ಮಾತನಾಡುತ್ತೇನೆ ಎಂದು ಹೇಳಿದರು.

ಇಲ್ಲಿಯವರೆಗೆ ಪಕ್ಷಕ್ಕೆ ಡ್ಯಾಮೇಜ್‌ ಆಗಬಾರದೆಂದು ಸುಮ್ಮನೇ ಇದ್ದೆ. ಈ ಬಾರಿ ನಮ್ಮಂತಹವರನ್ನು ಅಪಮಾನ ಮಾಡಿದರೆ, ಬೀದಿಗೆ ಇಳಿದು ಮಾತನಾಡುತ್ತೇನೆ. ರಾಮುಲು ಯಾವತ್ತೂ ಪಕ್ಷ ಬಿಟ್ಟು ಹೋಗಲ್ಲ. ಇದು ರಾಜ್ಯದ ಜನರಿಗೂ ಗೊತ್ತಿದೆ. ನಾನು ಹೋಗಬೇಕೆಂದರೆ, ನನ್ನನ್ನು ಯಾರೂ ತಡೆಯೋಕೆ ಆಗಲ್ಲ. ಈಗಿನ ಕಾಲದಲ್ಲಿ ಯಾರು ಯಾರ ಮಾತನ್ನೂ ಕೇಳುವುದಿಲ್ಲ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago