ಬೆಂಗಳೂರು: ಯಾವುದೋ ಒಂದು ಹಳೆಯ ಪ್ರಕರಣವನ್ನು ಕೆದಕಿ ನನ್ನನ್ನು ಬ್ಲ್ಯಾಕ್ಮೇಲ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಪ್ರೀಂನಲ್ಲಿರುವ ಪ್ರಕರಣವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ರಾಜ್ಯಪಾಲರಿಗೂ ಅವಮಾನ ಮಾಡುತ್ತಿದೆ. ಜಂತಕಲ್ ಗಣಿ ಪ್ರಕರಣವು ಹೈಕೋರ್ಟ್ನಲ್ಲಿ ವಜಾ ಆಗಿದೆ. ಸಾಯಿ ವೆಂಕಟೇಶ್ವರ ಹಗರಣದಲ್ಲಿ ತನಿಖೆ ನಡೆಯಬೇಕಿದೆ. ಇದನ್ನೆಲ್ಲಾ ಇಟ್ಟುಕೊಂಡು ನನ್ನನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕಿಡಿಕಾರಿದರು.
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಶಾಸಕರು ಹಾಗೂ ಸಚಿವರ ಮೂಲಕ ರಾಜ್ಯಪಾಲರಿಗೆ ಧಮ್ಕಿ ಹಾಕಿದ್ದಾರೆ. ತಾವು ಬಚಾವ್ ಆಗಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ನಲ್ಲಿನ ಪಿತೂರಿಗೆ ಸಿದ್ದರಾಮಯ್ಯ ಬಲಿಪಶು ಆಗುತ್ತಿದ್ದಾರೆ. ಯಾರೋ ಒಬ್ಬರು ಸಿದ್ದರಾಮಯ್ಯ ಜೊತೆ ಬಂಡೆಯಂತೆ ನಿಲ್ಲುವೆ ಎಂದು ಸೋಗು ಹಾಕುತ್ತಿದ್ದಾರೆ. ಆ ಬಂಡೆಯಿಂದಲೇ ಸಿದ್ದರಾಮಯ್ಯರಿಗೆ ಅಪಾರ ಎದುರಾಗಿದೆ. ಆದರೆ ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…