ಬೆಂಗಳೂರು: ಶಾಸಕ ಎಚ್.ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ವರದಿ ನೀಡಲು ನಾನು ಎಸ್ಐಟಿ ವಕ್ತಾರನಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿದ್ದಾರೆ.
ಎಚ್ಡಿ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿ, ಎಚ್ ಡಿ ರೇವಣ್ಣ ವಿರುದ್ಧ ದೂರು ದಾಖಲಾದ ಬಳಿಕವೇ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಎಸ್ಐಟಿ ತಂಡ ರೇವಣ್ಣ ಅವರನ್ನು ಮ್ಯಾಜಿಸ್ಟ್ರೇಟರ್ ಮುಂದೆ ನಿಲ್ಲಿಸುತ್ತಾರೆ ಮತ್ತು ಮುಂದೆ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅವರು ತೀರ್ಮಾನಿಸುತ್ತಾರೆ. ಅದು ಎಸ್ಐಟಿ ಅವರ ಕೆಲಸವಾಗಿದ್ದು, ಅದರ ಬಗ್ಗೆ ಪ್ರತಿನಿತ್ಯ ವರದಿ ನೀಡಲು ನಾನು ವಕ್ತಾರನಲ್ಲ ಎಂದು ಕಿಡಿಕಾರಿದ್ದಾರೆ.
ಎಸ್ಐಟಿ ತಂಡ ಕಾನೂನಾತ್ಮಕವಾಗಿ ತನ್ನ ಕೆಲಸವನ್ನು ಮಾಡುವ ಮೂಲಕ ರೇವಣ್ಣ ಅವರನ್ನು ಬಂಧಿಸಿದೆ. ಇದು ಜೆಡಿಎಸ್ ನವರಿಗೆ ಸಹಜವಾಗಿಯೇ ನೋವುಂಟು ಮಾಡುತ್ತದೆ. ಎಸ್ಐಟಿ ನಿಯಮಾನುಸಾರ ಕೆಲಸ ಮಾಡದಿದ್ದರೇ ಮುಂದೊಂದು ದಿನ ಎಸ್ಐಟಿ ಮೇಲೂ ಆರೋಪ ಮಾಡಬಹುದು ಹಾಗಾಗಿ ಎಸ್ಐಟಿ ತನ್ನ ಕೆಲಸ ಮಾಡಿದೆ ಎಂದು ಸ್ಪಷ್ಟನೆ ನೀಡಿದರು.
ಇನ್ನು ಪ್ರಜ್ವಲ್ ರೇವಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅವರ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಇಂಟರ್ ಪೋಲ್ ನವರು ಎಲ್ಲಾ ದೇಶಗಳೊಂದಿಗೂ ಕಮ್ಯುನಿಕೇಟ್ ಮಾಡುತ್ತಿದ್ದಾರೆ. ಆಮೂಲಕ ಪ್ರಜ್ವಲ್ ಲೊಕೇಷನ್ ಕಂಡು ಹಿಡಿಯುತ್ತಿದ್ದಾರೆ. ಆ ನಂತರ ಪ್ರಜ್ವಲ್ ರನ್ನು ಹೇಗೆ ಸುರಕ್ಷಿತವಾಗಿ ಬಂಧಿಸಿ ಭಾರತಕ್ಕೆ ವಾಪಾಸ್ ಕರೆತರಬೇಕು ಎಂಬ ಬಗ್ಗೆ ಎಸ್ಐಟಿ ನಿರ್ಧರಿಸಲಿದೆ ಎಂದು ವಿವರಿಸಿದರು.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…