ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.
ಇದರಿಂದ ಕಾನೂನು ಹೋರಾಟದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಮೇಲುಗೈ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಸದ್ಯ ಪ್ರಕರಣವು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ನಲ್ಲಿ ಮುಂದುವರಿಯುತ್ತಿದೆ.
ಪ್ರಕರಣ ಹಿನ್ನೆಲೆ
“ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ನನ್ನ ವಿರುದ್ಧ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ…” “ಸದಾ ಸುದ್ದಿಯಲ್ಲಿರಬೇಕೆಂದು ಬಯಸುವ ರೂಪಾ… ಕೀಳುಮಟ್ಟದ ಪ್ರವೃತ್ತಿ ಪ್ರದರ್ಶಿಸುತ್ತಿದ್ದಾರೆ.” “ಉನ್ನತ ಸ್ಥಾನದಲ್ಲಿರುವ ರೂಪಾ ಒಳ್ಳೆಯ ಕೆಲಸಗಳತ್ತ ಗಮನಹರಿಸುವುದನ್ನು ಬಿಟ್ಟು… ನನ್ನ ವಿರುದ್ಧ ಸುಳ್ಳು, ವೈಯಕ್ತಿಕ ನಿಂದನೆ ಅಭಿಯಾನ ನಡೆಸುತ್ತಿದ್ದಾರೆ.” ಎಂದು ರೋಹಿಣಿ ಸಿಂಧೂರು ಮಾಧ್ಯಮ ಅವರು ರೂಪಾ ಮೌದ್ಗಿಲ್ ವಿರುದ್ಧ ಪ್ರಕಟಣೆಯಲ್ಲಿ ಹೊರಡಿಸಿದ್ದರು.
ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿತ್ತು (ಸುಮಾರು 1.8 ಲಕ್ಷ ವೀಕ್ಷಣೆಗಳು). ಇದರಿಂದ ರೂಪಾ ಮೌದ್ಗಿಲ್ ಅವರಿಗೆ ಮಾನಸಿಕ ಯಾತನೆ, ಕುಟುಂಬಕ್ಕೂ ತೊಂದರೆ ಉಂಟಾಗಿದೆ ಎಂದು ಆರೋಪಿಸಿ, ಅವರು ಮಾನಹಾನಿ ಪ್ರಕರಣ ಹೂಡಿದ್ದರು. ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣ ಸ್ವೀಕರಿಸಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…
ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ…