ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.
ಇದರಿಂದ ಕಾನೂನು ಹೋರಾಟದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಮೇಲುಗೈ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಸದ್ಯ ಪ್ರಕರಣವು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ನಲ್ಲಿ ಮುಂದುವರಿಯುತ್ತಿದೆ.
ಪ್ರಕರಣ ಹಿನ್ನೆಲೆ
“ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್ ಅಧಿಕಾರಿ ರೂಪಾ ನನ್ನ ವಿರುದ್ಧ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ…” “ಸದಾ ಸುದ್ದಿಯಲ್ಲಿರಬೇಕೆಂದು ಬಯಸುವ ರೂಪಾ… ಕೀಳುಮಟ್ಟದ ಪ್ರವೃತ್ತಿ ಪ್ರದರ್ಶಿಸುತ್ತಿದ್ದಾರೆ.” “ಉನ್ನತ ಸ್ಥಾನದಲ್ಲಿರುವ ರೂಪಾ ಒಳ್ಳೆಯ ಕೆಲಸಗಳತ್ತ ಗಮನಹರಿಸುವುದನ್ನು ಬಿಟ್ಟು… ನನ್ನ ವಿರುದ್ಧ ಸುಳ್ಳು, ವೈಯಕ್ತಿಕ ನಿಂದನೆ ಅಭಿಯಾನ ನಡೆಸುತ್ತಿದ್ದಾರೆ.” ಎಂದು ರೋಹಿಣಿ ಸಿಂಧೂರು ಮಾಧ್ಯಮ ಅವರು ರೂಪಾ ಮೌದ್ಗಿಲ್ ವಿರುದ್ಧ ಪ್ರಕಟಣೆಯಲ್ಲಿ ಹೊರಡಿಸಿದ್ದರು.
ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿತ್ತು (ಸುಮಾರು 1.8 ಲಕ್ಷ ವೀಕ್ಷಣೆಗಳು). ಇದರಿಂದ ರೂಪಾ ಮೌದ್ಗಿಲ್ ಅವರಿಗೆ ಮಾನಸಿಕ ಯಾತನೆ, ಕುಟುಂಬಕ್ಕೂ ತೊಂದರೆ ಉಂಟಾಗಿದೆ ಎಂದು ಆರೋಪಿಸಿ, ಅವರು ಮಾನಹಾನಿ ಪ್ರಕರಣ ಹೂಡಿದ್ದರು. ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣ ಸ್ವೀಕರಿಸಿ ಸಿಂಧೂರಿಗೆ ನೋಟಿಸ್ ಜಾರಿ ಮಾಡಿತ್ತು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…