ಉಡುಪಿ: ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸುವ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಮಂಗನ ಕಾಯಿಲೆಗೆ ಎಬಿಎಆರ್ಕೆ ಫಂಡ್ ನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಒಟ್ಟು 70 ಕೆಎಫ್ಡಿ ಪ್ರಕರಣ ದಾಖಲಾಗಿವೆ. 20 ಸಕ್ರಿಯ ಪ್ರಕರಣಗಳಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ಗುಂಡೂರಾವ್ ವಿವರಿಸಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…