ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಈ ಪತ್ರವು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಡುವಿನ ಬಾಂಧವ್ಯವನ್ನು ಮತ್ತು ಸೈದ್ಧಾಂತಿಕ ಒಗ್ಗಟ್ಟನ್ನು ಎತ್ತಿ ತೋರಿಸುವ ಪ್ರಯತ್ನವಾಗಿದೆ. ಶಿವಕುಮಾರ್ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಸೈದ್ಧಾಂತಿಕ ಬದ್ಧತೆ: ಯಾವುದೇ ಕಾರಣಕ್ಕೂ ಪಕ್ಷದ ಸಿದ್ಧಾಂತದ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಸೈದ್ಧಾಂತಿಕ ನಿಲುವುಗಳು ಪಕ್ಷದ ಅಡಿಪಾಯ ಎಂದು ಸಿದ್ದರಾಮಯ್ಯ ಅವರು ಒತ್ತಿ ಹೇಳಿದ್ದಾರೆ.
‘ಕೋಟಿ ಕನ್ನಡಿಗರು ನಿಮ್ಮೊಂದಿಗಿದ್ದಾರೆ’ ಎಂದು ಧೈರ್ಯ ತುಂಬುವ ಮೂಲಕ, ಜನಪರವಾದ ಕೆಲಸಗಳನ್ನು ಮಾಡುವುದನ್ನು ಮುಂದುವರಿಸಿ, ನಿಮ್ಮ ಹೋರಾಟಕ್ಕೆ ಜನರ ಆಶೀರ್ವಾದವಿದೆ ಎಂದು ಸಂದೇಶ ನೀಡಿದ್ದಾರೆ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಧೃತಿಗೆಡದೆ, ಪಕ್ಷವನ್ನು ಬಲಪಡಿಸುವ ಮತ್ತು ಸಂಘಟಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು… ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಯಾತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.
ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಽಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ.
‘ಈಗ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ’
ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ಧತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.
ಸೈದ್ಧಾಂತಿಕವಾಗಿ ಎಂದೂ ಸೋಲಬಾರದು
ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡ ನಮ್ಮೆಲ್ಲರ ಮೇಲಿದೆ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.
ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.
ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ.
ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ. ನಿಮಗೆ ಸದಾ ಯಶಸ್ಸು ಸಿಗಲಿ ಎಂದು ಸಿದ್ದರಾಮಯ್ಯ ಅವರು ಶಿವಕುಮಾರ್ ಅವರಿಗೆ ಹಾರೈಸಿದ್ದಾರೆ.
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…