ಬೆಂಗಳೂರು: ಅಧಿಕಾರಕ್ಕಾಗಿ ಕುಮಾರಸ್ವಾಮಿ ಏನು ಬೇಕಾದರೂ ಮಾಡ್ತಾರೆ, ಎಲ್ಲಿಗೆ ಬೇಕಾದರೂ ಹೋಗ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು. ಕುಮಾರಸ್ವಾಮಿ ವಿಧಾನಸಭೆಯಲ್ಲಿ 40 ಸೀಟ್ ಬರುತ್ತೆ ಅಂತಾ ತೀವ್ರ ಸಂತೋಷದಲ್ಲಿದ್ದರು. ಆಗ ಬಿಜೆಪಿ ಅಥವಾ ಕಾಂಗ್ರೆಸ್ನವರು ನಮ್ಮ ಬಳಿ ಬರುತ್ತಾರೆ ಎಂದು ನಂಬಿಕೊಂಡಿದ್ದರು. ಆದರೆ ರಾಜ್ಯದ ಜನರ ಅದನ್ನೆಲ್ಲಾ ಬುಡಮೇಲು ಮಾಡಿದರು ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿಯವರಿಗೆ ಸಿದ್ಧಾಂತ ಮುಖ್ಯವಲ್ಲ. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಎಲ್ಲಿಗೆ ಬೇಕಾದರೂ ಹೋಗುತ್ತಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಜನರ ಪರವಿದ್ದು, ಎಲ್ಲರಿಗೂ ಆಸರೆಯಾಗಲಿದೆ. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ತುಂಬಾ ಅನುಕೂಲ ಆಗುತ್ತಿದೆ. ನಮ್ಮ ಸರ್ಕಾರ ರೈತರ ಪರವಿದ್ದು, ಬರ ಪರಿಹಾರ ಹಾಗೂ ನೆರೆ ಪರಿಹಾರವನ್ನು ಸಹ ನೀಡಲಾಗುತ್ತದೆ. ಹೀಗಾಗಿ ಯಾರೂ ಕೂಡ ಭಯಪಡುವ ಅವಶ್ಯಕತೆಯಿಲ್ಲ. ನಮ್ಮ ಸರ್ಕಾರವನ್ನು ಯಾರೂ ಏನೂ ಮಾಡಲು ಆಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…