Idol desecration case: Former CM Yediyurappa expresses outrage
ಬೆಂಗಳೂರು: ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿನ ನಾಗರಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆಸೆದಿರುವ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದರೆ ತಕ್ಷಣವೇ ಈ ಕೃತ್ಯ ಎಸಗಿರುವ ಆರೋಪಿಗಳ ಮೇಲೆ ಒಂದು ಕ್ಷಣವೂ ಹಿಂದೆ ಮುಂದೆ ನೋಡದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಸರ್ಕಾರ ಇನ್ನು ಏಕೆ ಮೀನಾಮೇಷ ಎಣಿಸುತ್ತಿದೆ ಎಂದು ಪ್ರಶ್ನೆ ಮಾಡಿದರು.
ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುವುದು, ಇಲ್ಲವೇ ಅಗೌರವ ತೋರುವುದು ಸರಿಯಲ್ಲ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನು ಪ್ರಕಾರವೇ ಶಿಕ್ಷೆ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…