ರಾಜ್ಯ

ಡಿಕೆಶಿ ಭ್ರಷ್ಟರಲ್ಲದಿದ್ದರೆ ಸಿಬಿಐ ತನಿಖೆ ಎದುರಿಸಿ ಹೊರಬರಲಿ: ಬಿವೈ ವಿಜಯೇಂದ್ರ

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಈ ಕುರಿತು ಮಾದ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಡಿಕೆ ಶಿವಕುಮಾರ್‌ ಅವರಿಗೆ ಚಿನ್ನದಂತ ಅವಕಾಶವಿದ್ದು, ತಾವು ಸತ್ಯಹರಿಶ್ಚಂದ್ರ ಎಂಬುದನ್ನು ಸಾಬೀತು ಪಡಿಸಲು ಇದು ಕಾಲಾವಕಾಶವಾಗಿದೆ. ನಮ್ಮ ಅವಧಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಂಡಿದ್ದು ರಾಜಕೀಯ ಪ್ರೇರತವಲ್ಲ. ಪ್ರಾಧಮಿಕ ತನಿಖೆಯನ್ನಾಧರಿಸಿ ಸಿಬಿಐಗೆ ಪ್ರಕರಣ ನೀಡಲಾಗಿತ್ತು ಎಂದು ಹೇಳಿದರು.

ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ತೀರ್ಮಾನ ಸಂಪೂರ್ಣವಾಗಿ ಕಾನೂನು, ಸಂವಿಧಾನಕ್ಕೆ ವಿರುದ್ಧವಾದುದು. ಈ ತೀರ್ಮಾನವನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಡಿ. ಕೆ. ಶಿವಕುಮಾರ್ ಅವರನ್ನು ರಕ್ಷಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿ.ಕೆ ಶಿವಕುಮಾರ್ ಅವರು ಭ್ರಷ್ಟರಲ್ಲದಿದ್ದರೆ ಸಿಬಿಐ ತನಿಖೆ ಎದುರಿಸಿ ಹೊರಬರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.

ಪ್ರತಿಭಟನೆ : ಸಿಬಿಐಗೆ ನೀಡಲಾಗಿದ್ದ ಪ್ರಕರಣವನ್ನು ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ(ನವೆಂಬರ್‌ ೨೫) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ. ಇಂದು ಯಾವ ರೀತಿಯ ಹೋರಾಟ ಮಾಡಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಎಚ್‌ಡಿಕೆ ಹೇಳಿದ್ದೇನು? : ವಕೀಲರಾಗಿ, ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ರಾಜ್ಯದ ಗದ್ದುಗೆ ಹಿಡಿದರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಸರಿಯಲ್ಲ. ಎರಡು ಬಾರಿ ಹೈ ತೀರ್ಪನ್ನು ಸುಪ್ರೀಂ ಉಲ್ಲೇಖಿಸಿರುವ ನಿದರ್ಶನಗಳಿದ್ದು, ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಸರ್ಕಾರದ ಈ ನಿರ್ಧಾರ ಸರಿಯಲ್ಲ. ಲೂಟಿ ಮಾಡುವವರಿಗೆ ಸರ್ಕಾರವೇ ಅವಕಾಶ ಕೊಟ್ಟಂತೆ ಇದ್ದು, ಕಾನೂನಿಗಿಂತ ಸರ್ಕಾರ ಮೇಲಿದೆ ಎಂಬುದನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಸರ್ಕಾರವನ್ನು ತಿವಿದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಈ ಪ್ರಕರಣವನ್ನು ಹಿಂಪಡೆಯಲು ನೆನ್ನೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿತ್ತು.

andolanait

Recent Posts

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

1 min ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

3 mins ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

54 mins ago

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…

56 mins ago

ಎಚ್ಚರಿಕೆಯ ಘಂಟೆ ಬಾರಿಸಿದ ಅಕಾಲಿಕ ಮಳೆ

ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…

1 hour ago

ಪುದುಚೇರಿ | ಮುನ್ನಡೆಯಲ್ಲಿ ಮ್ಯಾಜಿಕ್‌ ನಂಬರ್‌ ತಲುಪಿದ ಎನ್‌ಡಿಎ

ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ. 294 ಅಭ್ಯರ್ಥಿಗಳು…

1 hour ago