ರಾಜ್ಯ

ಡಿಕೆಶಿ ಭ್ರಷ್ಟರಲ್ಲದಿದ್ದರೆ ಸಿಬಿಐ ತನಿಖೆ ಎದುರಿಸಿ ಹೊರಬರಲಿ: ಬಿವೈ ವಿಜಯೇಂದ್ರ

ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲಿನ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಾಸ್‌ ಪಡೆಯುವಂತೆ ತೀರ್ಮಾನಿಸಿರುವ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಈ ಕುರಿತು ಮಾದ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಡಿಕೆ ಶಿವಕುಮಾರ್‌ ಅವರಿಗೆ ಚಿನ್ನದಂತ ಅವಕಾಶವಿದ್ದು, ತಾವು ಸತ್ಯಹರಿಶ್ಚಂದ್ರ ಎಂಬುದನ್ನು ಸಾಬೀತು ಪಡಿಸಲು ಇದು ಕಾಲಾವಕಾಶವಾಗಿದೆ. ನಮ್ಮ ಅವಧಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಂಡಿದ್ದು ರಾಜಕೀಯ ಪ್ರೇರತವಲ್ಲ. ಪ್ರಾಧಮಿಕ ತನಿಖೆಯನ್ನಾಧರಿಸಿ ಸಿಬಿಐಗೆ ಪ್ರಕರಣ ನೀಡಲಾಗಿತ್ತು ಎಂದು ಹೇಳಿದರು.

ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ತೀರ್ಮಾನ ಸಂಪೂರ್ಣವಾಗಿ ಕಾನೂನು, ಸಂವಿಧಾನಕ್ಕೆ ವಿರುದ್ಧವಾದುದು. ಈ ತೀರ್ಮಾನವನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಡಿ. ಕೆ. ಶಿವಕುಮಾರ್ ಅವರನ್ನು ರಕ್ಷಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿ.ಕೆ ಶಿವಕುಮಾರ್ ಅವರು ಭ್ರಷ್ಟರಲ್ಲದಿದ್ದರೆ ಸಿಬಿಐ ತನಿಖೆ ಎದುರಿಸಿ ಹೊರಬರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸವಾಲೆಸೆದರು.

ಪ್ರತಿಭಟನೆ : ಸಿಬಿಐಗೆ ನೀಡಲಾಗಿದ್ದ ಪ್ರಕರಣವನ್ನು ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ(ನವೆಂಬರ್‌ ೨೫) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದೆ. ಇಂದು ಯಾವ ರೀತಿಯ ಹೋರಾಟ ಮಾಡಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಎಚ್‌ಡಿಕೆ ಹೇಳಿದ್ದೇನು? : ವಕೀಲರಾಗಿ, ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ರಾಜ್ಯದ ಗದ್ದುಗೆ ಹಿಡಿದರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಸರಿಯಲ್ಲ. ಎರಡು ಬಾರಿ ಹೈ ತೀರ್ಪನ್ನು ಸುಪ್ರೀಂ ಉಲ್ಲೇಖಿಸಿರುವ ನಿದರ್ಶನಗಳಿದ್ದು, ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಸರ್ಕಾರದ ಈ ನಿರ್ಧಾರ ಸರಿಯಲ್ಲ. ಲೂಟಿ ಮಾಡುವವರಿಗೆ ಸರ್ಕಾರವೇ ಅವಕಾಶ ಕೊಟ್ಟಂತೆ ಇದ್ದು, ಕಾನೂನಿಗಿಂತ ಸರ್ಕಾರ ಮೇಲಿದೆ ಎಂಬುದನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಸರ್ಕಾರವನ್ನು ತಿವಿದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಈ ಪ್ರಕರಣವನ್ನು ಹಿಂಪಡೆಯಲು ನೆನ್ನೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿತ್ತು.

andolanait

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

12 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

12 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

12 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

12 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

12 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

12 hours ago