Stop Tug-of-War Over Leadership Debate; Focus on Development Instead
ಬೆಂಗಳೂರು : ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲದೆ, ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ ಮತ್ತು ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿದೆ. ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆಗೆ ಗಾಯಾಗಳು ಬಂದಾಗ ಮುಂಗಡ ಹಣಕ್ಕೆ ಬೇಡಿಕೆ ಇಡದೇ ಅವರಿಗೆ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ತುರ್ತು ಚಿಕಿತ್ಸೆ ನೀಡದಿದ್ದಲ್ಲಿ ಅಥವಾ ಚಿಕಿತ್ಸೆಗೂ ಮುನ್ನ ಹಣ ಕೇಳಿದ್ದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007 ರ ಸೆಕ್ಷನ್ 2ರ ಪ್ರಕಾರ ಒಂದು ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವುದರೊಂದಿಗೆ ಜೈಲು ಶಿಕ್ಷೆ ಆಗುವುದು ಎಂದು ಸುತ್ತೋಲೆ ಹೊರಡಿಸಿದೆ.
=========
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…