ರಾಜ್ಯ

ಗಾಯಾಳುಗಳಿಂದ ಚಿಕಿತ್ಸೆಗೂ ಮೊದಲೇ ಹಣ ಕೇಳಿದ್ರೆ ವೈದ್ಯರಿಗೆ ಜೈಲು ಶಿಕ್ಷೆ

ಬೆಂಗಳೂರು : ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲದೆ, ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ ಮತ್ತು ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿದೆ. ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆಗೆ ಗಾಯಾಗಳು ಬಂದಾಗ ಮುಂಗಡ ಹಣಕ್ಕೆ ಬೇಡಿಕೆ ಇಡದೇ ಅವರಿಗೆ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ತುರ್ತು ಚಿಕಿತ್ಸೆ ನೀಡದಿದ್ದಲ್ಲಿ ಅಥವಾ ಚಿಕಿತ್ಸೆಗೂ ಮುನ್ನ ಹಣ ಕೇಳಿದ್ದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007 ರ ಸೆಕ್ಷನ್ 2ರ ಪ್ರಕಾರ ಒಂದು ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವುದರೊಂದಿಗೆ ಜೈಲು ಶಿಕ್ಷೆ ಆಗುವುದು ಎಂದು ಸುತ್ತೋಲೆ ಹೊರಡಿಸಿದೆ.
=========

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago