Stop Tug-of-War Over Leadership Debate; Focus on Development Instead
ಬೆಂಗಳೂರು : ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲದೆ, ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ ಮತ್ತು ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿದೆ. ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆಗೆ ಗಾಯಾಗಳು ಬಂದಾಗ ಮುಂಗಡ ಹಣಕ್ಕೆ ಬೇಡಿಕೆ ಇಡದೇ ಅವರಿಗೆ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ತುರ್ತು ಚಿಕಿತ್ಸೆ ನೀಡದಿದ್ದಲ್ಲಿ ಅಥವಾ ಚಿಕಿತ್ಸೆಗೂ ಮುನ್ನ ಹಣ ಕೇಳಿದ್ದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007 ರ ಸೆಕ್ಷನ್ 2ರ ಪ್ರಕಾರ ಒಂದು ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವುದರೊಂದಿಗೆ ಜೈಲು ಶಿಕ್ಷೆ ಆಗುವುದು ಎಂದು ಸುತ್ತೋಲೆ ಹೊರಡಿಸಿದೆ.
=========
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…