g parameshwara pahalgam attack
ತುಮಕೂರು : 2013ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತೆ. ಬಹುಶಃ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಉಪಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನನ್ನ ಹಣೆಬರಹವೋ ಏನೋ ಗೊತ್ತಿಲ್ಲ. ನಾನು ಆಗ ಸೋತ ಕಾರಣಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು ಎಂದು ತಮ್ಮ ರಾಜಕೀಯ ಜೀವನ ನಡೆದು ಬಂದು ಹಾದಿ ನೆನದು ಭಾವುಕರಾದರು.
ರಾಜಕೀಯಕ್ಕೆ ಹೋಗಬೇಕೆಂಬ ಕಲ್ಪನೆಯೂ ಕೂಡ ಇರಲಿಲ್ಲ. ಕಾಲೇಜು ದಿನಗಳಲ್ಲಿ ಯೂತ್ ಕಾಂಗ್ರೆಸ್, ಎನ್ಎಸ್ಯುಐನಲ್ಲಿ ಓಡಾಡುತ್ತಿರಲಿಲ್ಲ. ವ್ಯಾಸಂಗ ಮಾಡುತ್ತಿದ್ದೆ. ರಾಜಕೀಯ ಪ್ರವೇಶ ಆಕಸ್ಮಿಕವಾಗಿ ಆಯಿತು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನಮ್ಮ ಕ್ಯಾಂಪಸ್ಗೆ ಭೇಟಿ ನೀಡಿದ್ದರು. ಅವರು ಕರೆ ಕೊಟ್ಟಿದ್ದರಿಂದ ಕಾಂಗ್ರೆಸ್ ಪಕ್ಷ ಸೇರಿಕೊಂಡೆ ಎಂದರು.
ರಾಜಕೀಯಕ್ಕೆ ಬಂದು 40 ವರ್ಷ ಆಗುತ್ತಿದೆ. ಇಷ್ಟು ವರ್ಷಗಳಲ್ಲಿ ಸ್ವಲ್ಪ ಕೆಲಸ ಮಾಡಿದ್ದೇನೆ, ಇಲ್ಲದಿದ್ದರೆ ಯಾರೂ ಗುರುತಿಸುವುದಿಲ್ಲ. ಪಕ್ಷ ಎಲ್ಲಾ ಹುದ್ದೆಯನ್ನೂ ಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು ಪಕ್ಷದಲ್ಲಿ ವರ್ಕಿಂಗ್ ಕಮಿಟಿಯಲ್ಲಿಯೂ ಸ್ಥಾನ ಕೊಟ್ಟಿದ್ದಾರೆ. ದೆಹಲಿಯಲ್ಲಿ ಎಐಸಿಸಿ ವರ್ಕಿಂಗ್ ಕಮಿಟಿಯಲ್ಲಿಯೂ ಸದಸ್ಯನನ್ನಾಗಿ ಮಾಡಿದ್ದರು. ಅದಾದ ನಂತರ 2018ರಲ್ಲಿ ಉಪಮುಖ್ಯಮಂತ್ರಿ ಮಾಡಿದರು ಎಂದು ಹೇಳಿದರು.
2018ರಲ್ಲಿ ಪಕ್ಷ 80 ಸೀಟು ಗೆದ್ದಿತ್ತು. 30 ಸೀಟುಗಳನ್ನು ಗೆದ್ದಿದ್ದ ಜೆಡಿಎಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದಾಗ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಅಂದೂ ಕೂಡ ನನ್ನನ್ನು ಮುಖ್ಯಮಂತ್ರಿ ಮಾಡಬಹುದಿತ್ತು, ಅದ್ರೆ ಎರಡನೇ ಸಲವೂ ಸಫಲ ಆಗಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂದು ತಿಳಿದಿದ್ದೆ. ಆದ್ರೆ ರಾಜಕೀಯ ಗೊತ್ತಲ್ಲ, ತೀರ್ಮಾನಗಳು ಹೇಗೇಗೋ ಆಗುತ್ತವೆ. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ. ರಾಜ್ಯದ ಜನ ನಮ್ಮನ್ನು ಗುರುತಿಸಿದ್ದಾರೆ ಎಂದು ಹೇಳಿದರು.
ಮನಿಲಾ: ಫಿಲಿಫೈನ್ಸ್ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ…
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದ್ದು, ಸಂಧ್ಯಾ…
ನೀಟ್- ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್ಇ ಪರೀಕ್ಷಾ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮೊದಲ ಕಂತಿನ ಸಂಪುಟ ರಚನೆಯಲ್ಲಾಗಿರುವ ಪ್ರಮಾದ ಸರಿಪಡಿಸದಿದ್ದರೆ ಭವಿಷ್ಯಲ್ಲಿ ಪಕ್ಷಕ್ಕೆ ಮಾರಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…