ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮ್ಮಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ಈ ಹಿಂದೆಯೂ ನಾನು ಇದನ್ನೇ ಹೇಳಿದ್ದೇನೆ. ಈಗಳು ಹೇಳುತ್ತಿದ್ದೇನೆ. ಅಧಿಕಾರ ಎನ್ನುವುದು ಯಾರಿಗೂ ಅಷ್ಟು ಸುಲಭವಾಗಿ ಸಿಗುವುದಿಲ್ಲ. ಎಲ್ಲವನ್ನೂ ತಾಳ್ಮೆಯಿಂದ ನೋಡಬೇಕು. ತಾಳ್ಮೆಯಿಂದ ಇರಬೇಕು ಎಂದು ಹೇಳಿದರು.
ನಮ್ಮ ಗುರಿ ಇರುವುದು 2028ರ ಚುನಾವಣೆ. ತಾಳ್ಮೆ ಇರಬೇಕು. ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿದ್ದಾರೆ. ಕೆಲವರು ವ್ಯಕ್ತಿಗೆ ಮಾತ್ರ ನಿಷ್ಠೆಯಿಂದ ಇರುತ್ತಾರೆ. ಜಾತಿ ಮೇಲೆ ರಾಜಕಾರಣ ಅಭಿವೃದ್ಧಿಗೆ ಕುಂಠಿತವಾಗುತ್ತದೆ. ಕೆಲವರು ಅಧಿಕಾರಕ್ಕೋಸ್ಕರ ಇರುತ್ತಾರೆ. ಡಿಕೆಶಿ ಎಲ್ಲಾ ತರಹದ ನೋವು, ಕಷ್ಟ ನೋಡಿದ್ದಾರೆ ಎಂದು ಹೇಳಿದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…