ರಾಜ್ಯ

ಮೋದಿ ತಮ್ಮ ಅವಧಿಯಲ್ಲಿನ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಸಿಎಂ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್‌ ಎಸೆದಿದ್ದಾರೆ.

ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ ವಚನ ಸ್ವೀಕರಿಸಿದ ನಂತರ ಕೊಟ್ಟ ಮಾತಿನಂತೆ ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸಿದೆ. ಆದರೆ ಕಳೆದ 10 ವರ್ಷಗಳಿಂದ ದೇಶವನ್ನಾಳುತ್ತಿರುವ ಪ್ರಧಾನಿ ತಮ್ಮ ಅಧಿಕಾರಾವಧಿಯಲ್ಲಿ ಕನಿಷ್ಟ ಕೆಲಸಗಳನ್ನು ಸಹಾ ಮಾಡಿಲ್ಲ ಎಂದು ಕಿಡಿಕಾರಿದರು.

ಈ ಬಾರಿಯ ಚುನಾವಣೆ ಬಿಜೆಪಿಯ ಸುಳ್ಳು ಹಾಗೂ ಕಾಂಗ್ರೆಸ್‌ನ ಸತ್ಯದ ನಡುವಿನ ಚುನಾವಣೆಯಾಗಿದೆ. ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ ಸೋಲುವುದು ಖಚಿತವಾದ ಹಿನ್ನಲೆ ಯಡಿಯೂರಪ್ಪ ಕಾಲಿಗೆ ಬಿದ್ದು ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್‌ ಕೊಡಿಸಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಎಂಪಿ ಗಳು ಕೋಲೆ ಬಸವ ಇದ್ದಂತೆ ರಾಜ್ಯದಲ್ಲಿ ಭೀಕರ ಬರ, ನೆರೆ ಬಂದಾಗಲೂ ಕೇಂದ್ರದ ವಿರುದ್ಧ ತುಟಿ ಬಿಚ್ಚಲಿಲ್ಲ. ಬದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಬರಗಾಲದ ಪರಿಹಾರಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡದೇ ಇದ್ದರೂ ಸಹಾ ಈ ಎಂಪಿಗಳು ಯಾವುದೇ ಮಾತು ಆಡಿಲ್ಲ. ಇವರು ಎಂಪಿಗಳಾಗಿರುವುದು ಕೇವಲ ʼಟಿಎ ಡಿಎʼ ತೆಗೆದುಕೊಳ್ಳುವುದಕ್ಕಾ? ಎಂದು ಎಂಪಿಗಳ ಮೌನವನ್ನು ಪ್ರಶ್ನಿಸಿದರು.

ನನ್ನನ್ನು ಕಂಡಾಗಲೆಲ್ಲಾ ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ಮೋದಿ ಅವರಿಗೆ ಉದ್ಯೋಗ ಕೊಟ್ಟಿಲ್ಲ ಎಂಬುದು ಅವರಿಗೆ ಅರಿವಾಗಿದೆ. ಇದು ಅದಾನಿ-ಅಂಬಾನಿ ದೇಶವಲ್ಲ 140 ಕೋಟಿ ಭಾರತೀಯರ ದೇಶವಾಗಿದೆ. ಮೋದಿ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅಕ್ಕಿ ನೀಡಲಿಲ್ಲ. ನಮ್ಮ ಸರ್ಕಾರ 1.18 ಕೋಟಿ ಕುಟುಂಬಗಳಿಗೆ ಉಚಿತ ಅಕ್ಕಿ ಹಾಗೂ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್‌ ನೀಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು ಸಿಎಂ ಸಿದ್ದರಾಮಯ್ಯ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago