ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್ ಎಸೆದಿದ್ದಾರೆ.
ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ ವಚನ ಸ್ವೀಕರಿಸಿದ ನಂತರ ಕೊಟ್ಟ ಮಾತಿನಂತೆ ಕಾಂಗ್ರೆಸ್ನ ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸಿದೆ. ಆದರೆ ಕಳೆದ 10 ವರ್ಷಗಳಿಂದ ದೇಶವನ್ನಾಳುತ್ತಿರುವ ಪ್ರಧಾನಿ ತಮ್ಮ ಅಧಿಕಾರಾವಧಿಯಲ್ಲಿ ಕನಿಷ್ಟ ಕೆಲಸಗಳನ್ನು ಸಹಾ ಮಾಡಿಲ್ಲ ಎಂದು ಕಿಡಿಕಾರಿದರು.
ಈ ಬಾರಿಯ ಚುನಾವಣೆ ಬಿಜೆಪಿಯ ಸುಳ್ಳು ಹಾಗೂ ಕಾಂಗ್ರೆಸ್ನ ಸತ್ಯದ ನಡುವಿನ ಚುನಾವಣೆಯಾಗಿದೆ. ದಾವಣಗೆರೆಯಲ್ಲಿ ಜಿಎಂ ಸಿದ್ದೇಶ್ವರ ಸೋಲುವುದು ಖಚಿತವಾದ ಹಿನ್ನಲೆ ಯಡಿಯೂರಪ್ಪ ಕಾಲಿಗೆ ಬಿದ್ದು ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಎಂಪಿ ಗಳು ಕೋಲೆ ಬಸವ ಇದ್ದಂತೆ ರಾಜ್ಯದಲ್ಲಿ ಭೀಕರ ಬರ, ನೆರೆ ಬಂದಾಗಲೂ ಕೇಂದ್ರದ ವಿರುದ್ಧ ತುಟಿ ಬಿಚ್ಚಲಿಲ್ಲ. ಬದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಬರಗಾಲದ ಪರಿಹಾರಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಡದೇ ಇದ್ದರೂ ಸಹಾ ಈ ಎಂಪಿಗಳು ಯಾವುದೇ ಮಾತು ಆಡಿಲ್ಲ. ಇವರು ಎಂಪಿಗಳಾಗಿರುವುದು ಕೇವಲ ʼಟಿಎ ಡಿಎʼ ತೆಗೆದುಕೊಳ್ಳುವುದಕ್ಕಾ? ಎಂದು ಎಂಪಿಗಳ ಮೌನವನ್ನು ಪ್ರಶ್ನಿಸಿದರು.
ನನ್ನನ್ನು ಕಂಡಾಗಲೆಲ್ಲಾ ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ಮೋದಿ ಅವರಿಗೆ ಉದ್ಯೋಗ ಕೊಟ್ಟಿಲ್ಲ ಎಂಬುದು ಅವರಿಗೆ ಅರಿವಾಗಿದೆ. ಇದು ಅದಾನಿ-ಅಂಬಾನಿ ದೇಶವಲ್ಲ 140 ಕೋಟಿ ಭಾರತೀಯರ ದೇಶವಾಗಿದೆ. ಮೋದಿ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅಕ್ಕಿ ನೀಡಲಿಲ್ಲ. ನಮ್ಮ ಸರ್ಕಾರ 1.18 ಕೋಟಿ ಕುಟುಂಬಗಳಿಗೆ ಉಚಿತ ಅಕ್ಕಿ ಹಾಗೂ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು ಸಿಎಂ ಸಿದ್ದರಾಮಯ್ಯ.
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…