ಮೈಸೂರು: ಸಂಸದೆ ಸುಮಲತಾ ಅಂಬರೀಶ್ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು ಹೋಗಿದೆ. ನಾವೆಲ್ಲ ಅದರ ಮುಂದೆ ಹುಲು ಮಾನವರು. ರಾಜಕೀಯ ಹೋರಾಟದಲ್ಲಿ ಜಗಳ ಇದ್ದೇ ಇರುತ್ತದೆ. ಅಂಬರೀಶ್ ಇದ್ದಾಗ ನಾವು ಪರಸ್ಪರ ಜೊತೆಯಾಗಿದ್ದೇವು. ನಮಗೆ ಸುಮಲತಾ ಅವರು ಶಾಶ್ವತ ಶತ್ರುವಲ್ಲ. ಅಗತ್ಯಬಿದ್ದರೇ ನಾವು ಭೇಟಿಯಾಗುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಡಿಎಂಕೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಯಾಗದಂತೆ ತಡೆಯುತ್ತೇವೆ ಎಂದು ಹೇಳಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನವರು ಮಾತನಾಡುತ್ತಾರೆ. ನೀರಾವರಿಗೆ ಎಚ್.ಡಿ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂತಹ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗಿಲ್ಲ ಎಂದು ಎಚ್ಡಿಕೆ ಕಿಡಿಕಾರಿದರು.
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…