ಮೈಸೂರು: ಸಂಸದೆ ಸುಮಲತಾ ಅಂಬರೀಶ್ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು ಹೋಗಿದೆ. ನಾವೆಲ್ಲ ಅದರ ಮುಂದೆ ಹುಲು ಮಾನವರು. ರಾಜಕೀಯ ಹೋರಾಟದಲ್ಲಿ ಜಗಳ ಇದ್ದೇ ಇರುತ್ತದೆ. ಅಂಬರೀಶ್ ಇದ್ದಾಗ ನಾವು ಪರಸ್ಪರ ಜೊತೆಯಾಗಿದ್ದೇವು. ನಮಗೆ ಸುಮಲತಾ ಅವರು ಶಾಶ್ವತ ಶತ್ರುವಲ್ಲ. ಅಗತ್ಯಬಿದ್ದರೇ ನಾವು ಭೇಟಿಯಾಗುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಡಿಎಂಕೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಯಾಗದಂತೆ ತಡೆಯುತ್ತೇವೆ ಎಂದು ಹೇಳಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ನವರು ಮಾತನಾಡುತ್ತಾರೆ. ನೀರಾವರಿಗೆ ಎಚ್.ಡಿ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಂತಹ ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ನವರಿಗಿಲ್ಲ ಎಂದು ಎಚ್ಡಿಕೆ ಕಿಡಿಕಾರಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…