ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 2017 ರಲ್ಲಿ ಜಿ.ಟಿ. ದೇವೇಗೌಡ ಅವರನ್ನು ಆರೆಸ್ಟ್ ಮಾಡಲು ಯೋಜನೆ ಹಾಕಿಕೊಂಡಿತು. ಈ ವಿಷಯ ಪೋಲಿಸ್ ಅಧಿಕಾರಿಗಳ ಮುಖಾಂತರ ನನಗೆ ಮುಟ್ಟಿತ್ತು. ಬಳಿಕ ಕುಮಾರಸ್ವಾಮಿ ಅವರು ಪೊಲೀಸರಿಗೆ ಕರೆ ಮಾಡಿ ಮಾತನಾಡಿದಾಗ, ಪೋಲಿಸರು ಜಿಟಿಡಿ ಅರೆಸ್ಟ್ ಮಾಡುವುದಕ್ಕೆ ಹಿಂದೇಟು ಹಾಕಿದರು. ಇಲ್ಲದೇ ಹೋಗಿದ್ರೆ ಜಿಟಿಡಿ ಮತ್ತು ಅವರ ಪುತ್ರ ನನ್ನ ಹಾಗೇ 20 ದಿನ ಜೈಲಿನಲ್ಲಿ ಕಳೆಯಬೇಕಾಗುವ ಸಂಭವವಿರುತ್ತಿತ್ತು ಎಂದು ಹೇಳಿದರು.
ಯಾವ ಕೇಸ್ ವಿಚಾರದಲ್ಲಿ ಎಂಬ ಪತ್ರಕರ್ತರ ಪ್ರಶ್ನೆಗೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರನ್ನು ಕೇಳಿ ಅಂತ ಕಾಂಗ್ರೆಸ್ ಮೇಲೆ ರೇವಣ್ಣ ಆರೋಪ ಮಾಡಿದರು.
ಇದೇ ವೇಳೆ ಜೆಡಿಎಸ್ ನಾಯಕ ಸುರೇಶ್ ಬಾಬು ಮಾತನಾಡಿ, ಜಿ.ಟಿ ದೇವೇಗೌಡರಿಗೆ ಪಕ್ಷದ ನಾಯಕರ ಮೇಲೆ ಅಸಮಾಧಾನ ಇರುವುದು ನಿಜ. ಆದರೆ ಅವರು ಕುರಿತು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ, ಮುಂದೆ ಸರಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…